ನಿಮ್ಮ ದಿನ ನಿತ್ಯದ ಊಟದ ಭಾಗದಲ್ಲಿ ಸಣ್ಣದಾದಾ ಒಣಕೊಬ್ಬರಿಯ ತುಂಡನ್ನು ಸೇವನೆ ಮಾಡುವುದರಿಂದ ನಿಮ್ಮ ದೇಹಕ್ಕೆ ಏನೆಲ್ಲ ಲಾಭಗಳಿವೆ ಹಾಗೂ ಯಾವ ರೋಗಗಳಿಗೆಲ್ಲ ಇದು ಉತ್ತಮ ಎಂದು ತಿಳಿಯೋಣ.
ಈ ದಿನಗಳಲ್ಲಿ ಸರ್ವೇ – ಸಾಮಾನ್ಯವಾಗಿ ಕಂಡು ಬರುವ ಪ್ರಮುಖ ಆರೋಗ್ಯ ಸಮಸ್ಯೆಗಳೆಂದರೆ ನಿಶ್ಶಕ್ತಿ, ಆಯಾಸ ,ಗಂಟುಗಳಲ್ಲಿ ನೋವು, ಸೊಂಟ ನೋವು, ರಕ್ತಹೀನತೆ, ಅಜೀರ್ಣ,ಕೂದಲು ಉದುರುವುದು, ಮೂಳೆಗಳ ಸೆಳೆತ, ಕಡಿಮೆ ರೋಗ ನಿರೋಧಕ ಶಕ್ತಿ, ಜ್ಞಾಪಕ ಶಕ್ತಿಯ ತೊಂದರೆ, ಮುಖದ ಚರ್ಮದಲ್ಲಿ ಕಾಂತಿ ಇಲ್ಲದಿರುವುದು. ಮುಖ ಸುಕ್ಕು ಗಟ್ಟುವುದು ಮುಂತಾದುವು.
ಇಂತಹ ಸಂದರ್ಭಗಳಲ್ಲಿ ಪ್ರತಿಯೊಬ್ಬರೂ ವ್ಯೆದ್ಯ ರ ಮೊರೆ ಹೋಗುವುದು ಸಹಜ. ವ್ಯೆದ್ಯರು ಇದನ್ನು ಸರಿಪಡಿಸಿಕೊಳ್ಳಲು ಹಲವಾರು ಮೆಡಿಸಿನ್ ಟ್ಯಾಬ್ಲೆಟ್ ಗಳ ಸೇವನೆಯ ಸಲಹೆ ಕೊಡುತ್ತಾರೆ.
ಆದರೆ ಈ ಔಷಧಿಗಳ ಫಲಿತಾಂಶ ಔಷಧಿಗಳನ್ನು ಸೇವಿಸುವ ತನಕ ಅಷ್ಟೇ ಆಮೇಲೆ ಯಾವುದೇ ರೀತಿಯ ಫಲಿತಾಂಶ ದೊರೆಯುವುದಿಲ್ಲ.
ಇದಕ್ಕಾಗಿ ನಾವು ನಮ್ಮ ಪ್ರತಿನಿತ್ಯದ ಆಹಾರದಲ್ಲಿ ಕೆಲವು ವಸ್ತುಗಳನ್ನು ತಪ್ಪದೇ ಸೇವಿಸಬೇಕು. ಇದರಲ್ಲಿ ಸಂಪೂರ್ಣವಾದ ಪೋಷಕಾಂಶಗಳಿದ್ದು ನಮ್ಮ ದೇಹದಲ್ಲಿನ ವಿಟಮಿನ್ ಕೊರತೆಗಳನ್ನು ನೀಗಿಸುವಂತಿರಬೇಕು.
ಇಂತಹುಗಳಲ್ಲಿ ಒಣ ಕೊಬ್ಬರಿ ಪ್ರಮುಖ ಸ್ಥಾನ ಪಡೆಯುತ್ತದೆ.
ಒಣಕೊಬ್ಬರಿಯನ್ನು ಸೂಪರ್ ಫುಡ್ ಎಂದು ಕರೆದರು ತಪ್ಪಾಗುವುದಿಲ್ಲ. ಅಷ್ಟೊಂದು ಪೋಷಕಾಂಶಗಳನ್ನು ಹೊಂದಿದೆ ಈ ಒಣಕೊಬ್ಬರಿ. ಬಹಳ ಜನರಿಗೆ ಒಣಕೊಬ್ಬರಿ ಎಂದರೆ ತುಂಬಾನೇ ಇಷ್ಟ. ಮನೆಯಲ್ಲಿ ಹಿರಿಯರು ಇದ್ದರೆ ಅವರು ಕೂಡ ಮಕ್ಕಳಿಗೆ ಒಣ ಕೊಬ್ಬರಿಯನ್ನು ತಿನ್ನಲು ಸಲಹೆ ಮಾಡುತ್ತಾರೆ. ಒಣ ಕೊಬ್ಬರಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್, ನಾರಿನಾಂಶ, ಕಾಪರ್, ಸೆಲೆನಿಯಂ ಎನ್ನುವ ಪೋಷಕಾಂಶಗಳಿವೆ.
ಹಾಗಾದರೆ ಯಾವೆಲ್ಲ ರೀತಿಯಲ್ಲಿ ಒಣಕೊಬ್ಬರಿಯನ್ನು ಸೇವಿಸಿದರೆ ಒಳ್ಳೆಯದು ಎಂದು ನೋಡುವುದಾದರೆ, ಸುಮಾರು 20 ರಿಂದ 25 ಗ್ರಾಂ ನಷ್ಟು ಪ್ರತೀ ದಿನ ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ಜಗಿದು ತಿನ್ನುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಉತ್ತಮ.
ದಿನದ ಯಾವುದೇ ಸಮಯದಲ್ಲಿ ಬೇಕಾದರೂ ಒಣಕೊಬ್ಬರಿಯನ್ನು ನೀವು ಸೇವಿಸಬಹುದು. ಒಣಕೊಬ್ಬರಿ ಪ್ರತಿನಿತ್ಯ ಸೇವಿಸುವುದರಿಂದ ಸಿಗುವ ಲಾಭಗಳೇನು ಹಾಗೂ ಯಾವ ರೀತಿಯ ರೋಗಗಳಿಗೆ ಒಣಕೊಬ್ಬರಿ ಸೇವನೆ ಒಳ್ಳೆಯದು ಎಂಬುದನ್ನು ನೋಡುವುದಾದರೆ.
ಒಣಕೊಬ್ಬರಿ ಸೇವಿಸುವುದರಿಂದ ನಮ್ಮ ದೇಹದ ಮೂಳೆಗಳು ಬಲ ಗೊಳ್ಳುತ್ತವೆ. ಇದು ನಮ್ಮ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಮೂಳೆಗಳ ಅಂಗಾಂಶ ಅಂದರೆ ಟಿಶುಗಳಲ್ಲಿ ಖನಿಜ ಅಂಶಗಳು ಹೆಚ್ಚಾಗಿ ಇರುತ್ತದೆ. ಇದು ಕಡಿಮೆಯಾದರೆ ದೇಹದ ಯಾವುದೇ ಭಾಗಕ್ಕೂ ತೊಂದರೆ ನೀಡಬಹುದು. ಒಣ ಕೊಬ್ಬರಿಯ ಸೇವನೆಯಿಂದ ಈ ಮೂಳೆಗಳಲ್ಲಿನ ಖನಿಜಾಂಶ ಅಂದರೆ ಮಿನರಲ್ ಗಳ ಕೊರತೆಯನ್ನು ನೀಗಿಸಲು ಸಹಾಯ ಮಾಡುತ್ತದೆ.
ಒಣ ಕೊಬ್ಬರಿಯಿಂದ ದೊರೆಯುವ ಈ ಮಿನರಲ್ ದೇಹಕ್ಕೆ ಬೇಗನೆ ಸೇರಿಬಿಡುತ್ತದೆ. ಇದರಿಂದಾಗಿ ಆರ್ಥರೈಟಿಸ್ ನಂತಹ ತೊಂದರೆಯಿಂದ ಪಾರಾಗಬಹುದು. ಇನ್ನು ಕೆಲವರ ಗಂಟುಗಳಲ್ಲಿ ಕರ್ಕಶ ಶಬ್ದವಾಗುತ್ತಿರುತ್ತದೆ. ಇದು ಮೂಳೆಗಳಲ್ಲಿರುವ ಲೂಬ್ರಿಕೇನ್ಟ್ ನ ಕೊರತೆಯಿಂದ ಉಂಟಾಗುವಂತಹುದು. ಇಂಥವರು ಒಣಕೊಬ್ಬರಿಯ ಸೇವನೆ ಮಾಡಬೇಕು. ಒಣಕೊಬ್ಬರಿಯಲ್ಲಿ ನೈಸರ್ಗಿಕವಾದ ಎಣ್ಣೆ ಹಾಗೂ ಖನಿಜಾ ಅಂಶ ಇರುವುದರಿಂದ ಇದು ಮೂಳೆಗಳನ್ನು ಬಲಶಾಲಿಯಾಗಿಸಿ ಸಮಸ್ಯೆಯನ್ನು ದೂರಗೊಳಿಸುತ್ತದೆ.
ಮೆದುಳು ಚುರುಕಾಗಿರುತ್ತದೆ.
ಒಣ ಕೊಬ್ಬರಿ ಸೇವನೆಯಿಂದ ನಿಮ್ಮ ಮೆದುಳು ಚುರುಕಾಗುತ್ತದೆ.ಇದರಿಂದ ಮೆದುಳಿನ ಕ್ರಿಯೆಗಳು ಸುಧಾರಣೆಗೊಳ್ಳುತ್ತವೆ. ನಿಮಗೆ ಜ್ಞಾಪಕ ಶಕ್ತಿ ಹೆಚ್ಚಾಗಬೇಕು ಹಾಗೂ ಮೆದುಳು ಚುರುಕಾಗಿ ಇರಬೇಕು ಅಂದರೆ ಒಣ ಕೊಬ್ಬರಿಯನ್ನು ಸೇವಿಸಲೇಬೇಕು.
ಪೈಲ್ಸ್ ಅಥವಾ ಮೂಲವ್ಯಾಧಿ ಸಮಸ್ಯೆ ಗೂ ಒಣಕೊಬ್ಬರಿ ಒಂದು ಒಳ್ಳೆಯ ಔಷಧಿ ಎನ್ನಬಹುದು.
ಇದನ್ನು ಮೂಲವ್ಯಾಧಿ ಇರುವವರು ಸೇವಿಸುವುದರಿಂದ ಮೂಲವ್ಯಾಧಿ ಸಮಸ್ಯೆ ಸರಿಹೋಗುತ್ತದೆ. ಒಣ ಕೊಬ್ಬರಿಯಲ್ಲಿ ಹೇರಳವಾದ ನಾರಿನ ಅಂಶವಿರುವುದರಿಂದ ಇದು ಮಲಬದ್ಧತೆಯ ಸಮಸ್ಯೆಯನ್ನು ಕೂಡ ಸರಿಪಡಿಸುತ್ತದೆ.ರಕ್ತಹೀನತೆಯ ಸಮಸ್ಯೆಯನ್ನು ಗುಣಪಡಿಸುತ್ತದೆ.
ಮಹಿಳೆಯರಲ್ಲಿ ಸಾಮಾನ್ಯವಾಗಿ ರಕ್ತಹೀನತೆಯ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ರಕ್ತಹೀನತೆಯ ಸಮಸ್ಯೆ ಹೆಚ್ಚಾದರೆ ಶರೀರದಲ್ಲಿ ಶಕ್ತಿಯಿರುವುದಿಲ್ಲ, ತಲೆಸುತ್ತು, ನಿಶ್ಯಕ್ತಿ ಮುಂತಾದ ತೊಂದರೆ ಎದುರಾಗುತ್ತದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಒಣಕೊಬ್ಬರಿಯ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು. ಏಕೆಂದರೆ ಒಣ ಕೊಬ್ಬರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣ ಅಂಶವಿದೆ.
ಶರೀರದಲ್ಲಿ ರಕ್ತವನ್ನು ಹೆಚ್ಚು ಮಾಡಲು ಒಣಕೊಬ್ಬರಿಯ ಸೇವನೆಯನ್ನು ತಪ್ಪದೇ ಮಾಡಿ. ಪದೇ ಪದೇ ತಲೆನೋವು ಅಥವಾ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಒಣಕೊಬ್ಬರಿಯನ್ನು ಹೀಗೆ ಬಳಸಿದರೆ ಸಂಪೂರ್ಣವಾಗಿ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.
ತುರಿದ ಕೊಬ್ಬರಿ10 ರಿಂದ 20 ಗ್ರಾಂ ತೆಗೆದುಕೊಳ್ಳಿ 5 ರಿಂದ 15 ಗ್ರಾಂ ನಷ್ಟು ಕಲ್ಲು ಸಕ್ಕರೆ ತೆಗೆದುಕೊಳ್ಳಿ.ಇವೆರಡನ್ನು ಇವೆರಡನ್ನೂ ಪುಡಿ ಮಾಡಿ ಇಟ್ಟುಕೊಂಡು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.ಈ ರೀತಿಯಾಗಿ ನೀವು ಪ್ರತಿನಿತ್ಯ ಸೇವಿಸಿದರೆ ಸ್ವಲ್ಪ ದಿನದಲ್ಲೇ ಎಷ್ಟೇ ಹಳೆಯದಾದ ತಲೆನೋವಿದ್ದರು ಹಾಗೂ ಮೈಗ್ರೇನ್ ಸಮಸ್ಯೆ ಕಡಿಮೆಯಾಗುತ್ತದೆ.
ಒಣಕೊಬ್ಬರಿಯನ್ನು ಸೇವಿಸುವುದರಿಂದ ಅಜೀರ್ಣತೆಯ ಸಮಸ್ಯೆಯೂ ಕೂಡ ಸರಿ ಹೋಗುತ್ತದೆ. ಇನ್ನು ಒಣ ಕೊಬ್ಬರಿಯನ್ನು ಮಧುಮೇಹಿಗಳು ಕೂಡ ಸೇವನೆ ಮಾಡಬಹುದು. ಇದು ರಕ್ತದಲ್ಲಿ ಅಧಿಕ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ.
ಕೊಬ್ಬರಿಯ ಸೇವನೆಯಿಂದ ಕೂದಲು ಉದುರುವ ಸಮಸ್ಯೆಯೂ ಬೇಗನೆ ಕಡಿಮೆಯಾಗುತ್ತದೆ. ಒಣಕೊಬ್ಬರಿ ಒಂದು ಒಳ್ಳೆಯ ಆ್ಯಂಟಿ ಬಯಾಟಿಕ್ ತರ ಕೆಲಸ ಮಾಡುತ್ತದೆ. ಇದರಿಂದಾಗಿ ಯಾವುದೇ ರೀತಿಯ ಅಲರ್ಜಿ ಅಥವಾ ಯಾವುದೇ ರೋಗಗಳು ನಮ್ಮ ದೇಹವನ್ನು ಸೇರದಂತೆ ತಡೆಯುತ್ತವೆ..
ಒಣ ಕೊಬ್ಬರಿ ನಮ್ಮ ಕಣ್ಣುಗಳ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ಇದರ ಸೇವನೆಯ ನಂತರ ಸ್ವಲ್ಪ ದಿನಗಳಲ್ಲಿಯೇ ನಿಮ್ಮ ದೇಹದಲ್ಲಿ ಒಳ್ಳೆಯ ವ್ಯತ್ಯಾಸ ಕಂಡುಬರುತ್ತದೆ. ನಮಗೆ ಯಾವುದೇ ಖಾಯಿಲೆ ಕಸಾಲೆ ಇರಲಿ ಇಂತಹ ಅದ್ಭುತವಾದ ಆಹಾರವನ್ನು ನಮ್ಮ ನಿತ್ಯದ ಆಹಾರದಲ್ಲಿ ಸೇರಿಸಿಕೊಂಡರೆ ನಮ್ಮ ದೇಹವು ಆರೋಗ್ಯವಾಗಿರುತ್ತದೆ.
ಥೈರಾಡ್ ಸಮಸ್ಯೆ ಇರುವವರು ಒಣಕೊಬ್ಬರಿ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು. ಥೈರಾಯ್ಡ್ ಸಮಸ್ಯೆ ದೇಹದಲ್ಲಿ ಸೆಲೆನಿಯಂ ಕೊರತೆಯಿಂದ ಉಂಟಾಗುತ್ತದೆ. ಒಣ ಕೊಬ್ಬರಿಯಲ್ಲಿ ಸೆಲೆನಿಯಂ ಅಧಿಕ ಪ್ರಮಾಣದಲ್ಲಿ ಇರುತ್ತದೆ. ನಿಮಗೆ ಹೈಪರ್ ಥೈರಾಯ್ಡ್ ಇರಲಿ ಅಥವಾ ಹೈಪೋ ಥೈರಾಯ್ಡ್ ಇರಲಿ ನೀವು ತಪ್ಪದೆ ಒಣಕೊಬ್ಬರಿ ಸೇವಿಸಿ.ಇದು ನಿಮ್ಮ ಥೈರಾಯ್ಡ್ ಹಾರ್ಮೋನನ್ನು ಗುಣಪಡಿಸುತ್ತದೆ.
ಇನ್ನು ಒಣಕೊಬ್ಬರಿ ಹೃದಯದ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.ಇದರಲ್ಲಿರುವ ಫೈಬರ್ ಹೃದಯವನ್ನು ಆರೋಗ್ಯವಾಗಿಡುತ್ತದೆ.ಒಣಕೊಬ್ಬರಿಯ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಪುರುಷರಲ್ಲಿ ಹಾಗೂ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆಯನ್ನು ನಿವಾರಿಸುತ್ತದೆ.ಇದರಿಂದಾಗಿ ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ನಿತ್ಯವೂ ತಪ್ಪದೆ ಒಣಕೊಬ್ಬರಿಯನ್ನು ಸೇವನೆ ಮಾಡುವುದು ಉತ್ತಮ.
ನಿದ್ರಾಹೀನತೆಯ ಸಮಸ್ಯೆಯನ್ನು ಸರಿಪಡಿಸುವ ಶಕ್ತಿ ಒಣಕೊಬ್ಬರಿಗಿದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ಹಾಲಿಗೆ ಎರಡು ಚಮಚ ತುರಿದ ಒಣ ಕೊಬ್ಬರಿಯನ್ನು ಹಾಕಿ ಕುಡಿಯುವುದರಿಂದ ಚೆನ್ನಾಗಿ ನಿದ್ರೆ ಬರುತ್ತದೆ.
Leave feedback about this