wowstava Blog LATEST WITH HUB LOCAL NEWS ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ,
LATEST WITH HUB LOCAL NEWS

ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ,

ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ, ಕನ್ನಡ ಜನೋತ್ಸವಾದಂತೆ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನ

ಕರ್ನಾಟಕ ಸುವರ್ಣ ಸಂಭ್ರಮದ ಐವತ್ತನೇ ವರ್ಷಾಚರಣೆ, ಕನ್ನಡ ಜನೋತ್ಸವಾದಂತೆ ಅದ್ದೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನ ಮಾಡಿದ್ದು, ಈ ಸಮಾರಂಭವು ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ 2024ರ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕೂಡ ನಡೆಯಲಿದ್ದು, ಈ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ಮುಖ್ಯಮಂತ್ರಿಗಳು, ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಎಲ್ಲ ಶಾಲಾ-ಕಾಲೇಜುಗಳಲ್ಲಿ ದೊಡ್ಡ ಮಟ್ಟದಲ್ಲಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಮುನ್ನಡೆಯುತ್ತಿದೆ. ರಥಯಾತ್ರೆಯ ಸಮಾರೋಪ ಸಮಾರಂಭವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಯಲಿದೆ.

ಇದರ ಜೊತೆಗೆ, ಕನ್ನಡ ಚರಿತ್ರೆಯನ್ನು ಇಂದಿನ ಯುವ ಸಮೂಹಕ್ಕೆ ತಲುಪಿಸುವ ದೃಷ್ಟಿಯಿಂದ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Exit mobile version