ಸೆಪ್ಟೆಂಬರ್ 3, 2024ರಂದು ಬೆಳಿಗ್ಗೆ 3:45ಕ್ಕೆ, ಬೆಂಗಳೂರಿನ ಯಶವಂತಪುರ ಫ್ಲೈಓವರ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದು, ಫ್ಲೈಓವರ್ನಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ತಮಿಳುನಾಡಿನ 29 ವರ್ಷ ವಯಸ್ಸಿನ ಸಾಫ್ಟ್ವೇರ್ ಇಂಜಿನಿಯರ್ ಎಸ್. ಶಬರೀಶ್ ಮೃತರಾಗಿದ್ದು, ಇತರ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಶಬರೀಶ್, ತಮ್ಮ ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿಗೆ ಬಂದಿದ್ದು, ಕಾರಿನಲ್ಲಿ ಸಹಪ್ರಯಾಣಿಕರಾಗಿದ್ದ ಮಿಥುನ್ ಚಕ್ರವರ್ತಿ, ಅನುಶ್ರೀ, ಮತ್ತು ಶಂಕರ್ ರಾಮ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿಥುನ್ ಕಾರು ನಡಿಸುತ್ತಿದ್ದು, 120 ಕಿಮೀ ವೇಗದಲ್ಲಿ ಸಾಗಿ, ಮಧ್ಯದಲ್ಲಿ ನಿಯಂತ್ರಣ ತಪ್ಪಿ ಸ್ಕೂಟರ್ಗೊಂದು ಢಿಕ್ಕಿ ಹೊಡೆದ ನಂತರ ಕಾರು ಫ್ಲೈಓವರ್ನಿಂದ ಸುಮಾರು 30 ಅಡಿ ಆಳಕ್ಕೆ ಬಿದ್ದಿದೆ.
ಅಪಘಾತದ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವುದರಿಂದ, ಚಾಲಕರು ಮದ್ಯಪಾನ ಮಾಡಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.